CrimeDistricts

ವಿಜಯಪುರ ಬಳಿ ಸರಣಿ ಅಪಘಾತ; ಒಂದೇ ಕುಟುಂಬದ ಮೂವರು ಸಾವು

ವಿಜಯಪುರ; ವಿಜಯಪುರದ ಕೊಲ್ಹಾರ ತಾಲ್ಲೂಕಿನ ಕುಪಕಡ್ಡಿ ಕ್ರಾಸ್‌ ಬಳಿ ಸರಣಿ ಅಪಘಾತ ನಡೆದಿದ್ದು, ಈ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಇದರಲ್ಲಿ ಮೂರು ತಿಂಗಳ ಮಗು ಹಾಗೂ ಬಾಣಂತಿ ಕೂಡಾ ಸೇರಿದ್ದಾರೆ. ಸರ್ಕಾರಿ ಬಸ್‌ ಹಾಗೂ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಈ ದುರಂತ ನಡೆದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ ಮೂಲದ ಕಲಶೆಟ್ಟಿ ಕುಟುಂಬದವರಾದ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ( 25) ಹಾಗೂ ಮಗು ಸುಮನ್ (3 ತಿಂಗಳು) ಕಾರಿನಲ್ಲೇ ಮೃತಪಟ್ಟರೇ ಶರಣಮ್ಮ ಬಸವರಾಜ್ ಕಲಶೆಟ್ಟಿ (55) ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಉಮೇಶ ಕಲಶೆಟ್ಟಿ ಮತ್ತು ಅವರ ಪತ್ನಿ ಸುರೇಖಾ ಹಾಗೂ ಮಕ್ಕಳಾದ ಸುಹಾನ್ (8 ತಿಂಗಳು) ಮತ್ತು ಸಾನ್ವಿ (2) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಗಲಕೋಟೆಯಿಂದ ವಿಜಯಪುರಕ್ಕೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗೆ ಎದುರಿಗೆ ಬರುತ್ತಿದ್ದ ಎರಡು ಕಾರುಗಳಲ್ಲಿ ಒಂದು ಕಾರು ಹಿಂದಿಕ್ಕುವ ಬರದಲ್ಲಿ ಎರಡು ಕಾರುಗಳು ಬಸ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

Share Post