CrimeDistricts

ಕೆರೂರಿನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ; ಚೂರಿ ಇರಿತ

ಬಾಗಲಕೊಟೆ; ಬದಾಮಿ ತಾಲ್ಲೂಕಿನ ಕೆರೂರು ಬಸ್‌ ನಿಲ್ದಾಣದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ.  ಘಟನೆಯಲ್ಲಿ ಅರುಣ್,  ಲಕ್ಷ್ಮಣ್,  ಯಮನೂರು ಎಂಬುವರಿಗೆ ಗಾಯಗಳಾಗಿವೆ. ನೂಪುರ್ ಶರ್ಮಾ ಪರ-ವಿರೋಧ ವಿಚಾರವಾಗಿಯೇ ಬಾಗಲಕೋಟೆಯ ಕೇರೂರಿನಲ್ಲಿ ಗುಂಪು ಘರ್ಷಣೆ ನಡೆದಿದೆ. ಅನ್ಯಕೋಮಿನ ವ್ಯಕ್ತಿಯೊಬ್ಬರು ನೂಪುರ್ ವಿರುದ್ಧ ಪೋಸ್ಟ್ ಹಾಕಿದ್ದನ್ನು ವಿರೋಧಿಸಿ ಶುರುವಾದ ಜಗಳ ಕೋಮು ಘರ್ಷಣೆಗೆ ದಾರಿ ಮಾಡಿಕೊಟ್ಟಿದೆ.

ಅರುಣ್ ಕಟ್ಟಿಮನಿ ಸೇರಿ ಆತನ ಸ್ನೇಹಿತರು ಬಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದರು. ಆಗ ಹಿಂದಿನಿಂದ ಬಂದ ದುಷ್ಕರ್ಮಿಗಳು ಅರುಣ್ ಬೆನ್ನಿಗೆ ಚೂರಿ ಹಾಕಿದ್ದಾರೆ. ತಕ್ಷಣವೇ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಈ ಘಟನೆಯಿಂದ ರೊಚ್ಚಿಗೆದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಕೆರೂರು ಪಟ್ಟಣದ ಬಸ್ ನಿಲ್ದಾಣದ ಮುಂದಿನ ಎರಡು ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಿ, ಐದು ಬೈಕ್‍ಗಳನ್ನು ಜಖಂಗೊಳಿಸಿ ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೆ ತರಕಾರಿ ಅಂಗಡಿಗಳನ್ನು ಧ್ವಂಸ ಮಾಡಿದರು. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

 

Share Post