DistrictsPolitics

ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ್‌ ಕಾರು ಅಪಘಾತ; ಐಸಿಯುಲ್ಲಿ ಚಿಕಿತ್ಸೆ

ಯಾದಗಿರಿ; ಇತ್ತೀಚೆಗಷ್ಟೇ ಕಾಂಗ್ರೆಸ್‌ ಸೇರಿ ಗುರುಮಿಠ್ಕಲ್‌ ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಬಾಬುರಾವ್‌ ಚಿಂಚನಸೂರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಪ್ರಚಾರ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಕಲಬುರಿಗಿಯ ಆಕಾಶವಾಣಿ ಕೇಂದ್ರ ಬಳಿ ಅಪಘಾತ ನಡೆದಿದೆ. ಚಿಂಚನಸೂರು ಅವರ ತಲೆ ಹಾಗೂ ಕಾಲಿಗೆ ಪೆಟ್ಟಾಗಿದ್ದಯ, ಯುನೈಟೆಡ್‌ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಬುರಾವ್‌ ಚಿಂಚನಸೂರ್‌ ಅವರು ಯಾದಗಿರಿಯಿಂದ ಕಲಬುರಗಿಗೆ ಹೋಗುತ್ತಿದ್ದಾಗ ರಾತ್ರಿ 12.30 ರಲ್ಲಿ ಈ ದುರ್ಘಟನೆ ನಡೆದಿದೆ. ರಸ್ತೆ ಮಧ್ಯದಲ್ಲಿ ಗುಂಡಿ ಇದ್ದು, ಅದರಲ್ಲಿಳಿದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ ಎನ್ನಲಾಗಿದೆ. ಕಾರು ಚಾಲಕ ನಿದ್ರೆ ಮಂಪರಿನಲ್ಲಿ ಕಾರು ಚಲಾಯಿಸುತ್ತಿದ್ದರಿಂದ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

Share Post