DistrictsPolitics

ತುರುವೇಕೆರೆಯಲ್ಲಿಂದು ಕಾಂಗ್ರೆಸ್‌ ಬೃಹತ್ ಸಮಾವೇಶ

ತುಮಕೂರು; ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿಂದು ಕಾಂಗ್ರೆಸ್‌ನ ಬೃಹತ್ ಸಮಾವೇಶ ನಡೆಯಲಿದೆ. ಇಲ್ಲಿನ ಗುರುಭವನದಲ್ಲಿ ಸಮಾವೇಶ ನಡೆಯಲಿದ್ದು ಬೃಹತ್ ವೇದಿಕೆ ಸಿದ್ದಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್. ಡಾ ಜಿ ಪರಮೇಶ್ವರ್, ಹೆಚ್. ಆಂಜನೇಯ, ಜಮೀರ್ ಅಹಮದ್ ಸೇರಿ ಹಲವು ನಾಯಕರು ಭಾಗಿಯಾಗಲಿದ್ದಾರೆ.

ತುರುವೇಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿ ಬೆಮೆಲ್ ಕಾಂತರಾಜು ನೇತೃತ್ವದಲ್ಲಿ ಸಮಾವೇಶ ನಡೆಯುತ್ತಿದ್ದು ಸಾವಿರಾರು ಮಂದಿ ಜನ ಸೇರುವ ನಿರೀಕ್ಷೆ ಇದೆ. ವೇದಿಕೆ ಪಕ್ಕದಲ್ಲಿ ಕಾರ್ಯಕರ್ತರಿಗೆ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿದ್ದು ಸಕಲ‌ ಸಿದ್ದತೆ ನಡೆಯುತ್ತಿದೆ.

Share Post