Districts

ಕಾಂಗ್ರೆಸ್‌ ಮುಖಂಡರ ವಿನೂತನ ಪ್ರತಿಭಟನೆ

ಹುಬ್ಬಳ್ಳಿ: ರಸ್ತೆ ದುರಸ್ಥಿಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್‌ ಮುಖಂಡರು ಈ ಹಿಂದೆ ಹಲವು ಬಾರಿ ಮನವಿ ಮಾಡಿದರು. ಇದ್ದರಿಂದ ಈವರೆಗೂ ಕ್ರಮ ಕೈಗೊಂಡಿಲ್ಲವೆಂದು ಕಾಂಗ್ರೆಸ್‌ ಮುಖಂಡರು ರಸ್ತೆ ಮಧ್ಯೆ ಗಣಹೋಮ ಮಾಡುವ ಮೂಲಕ ನೂತನ ಪ್ರತಿಭಟನೆ ಮಾಡಿದರು.
ನಗರದ ಕೊಪ್ಪಿಕರ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿದರು. ಈಗಾಗಲೇ ಅನೇಕ ಬಾರಿ ರಸ್ತೆಗಳ ದುರಸ್ತಿ ಮಾಡುವಂತೆ ನಾವು ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೆ ಯಾವುದೇ ಪ್ರಯೋಜನೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಎರಡು ವರ್ಷದಿಂದ ರಸ್ತೆಗಳು ಹಾಳಾಗಿದ್ದು, ಸ್ಮಾರ್ಟ್ ಸಿಟಿ ಯೋಜನೆ ಅನುದಾನ ಬಂದರೂ ಕೂಡ ಅಭಿವೃದ್ಧಿಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರ ಗಮನ ಸೆಳೆಯಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.

Share Post