CrimeDistrictsPolitics

ಕಾಂಗ್ರೆಸ್‌ ನಾಯಕಿ ವೀಣಾ ಕಾಶಪ್ಪನವರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ..!

ವಿಜಯಪುರ; ಬಾಗಲಕೋಟೆ ಜಿಪಂ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್‌ ನಾಯಕಿ ವೀಣಾ ಕಾಶಪ್ಪನವರ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ವಿಜಯಪುರ ನಗರದ ಸಿಂದಗಿ ಬೈಪಾಸ್‌ ಬಳಿ ಬೈಕ್‌ ಡಿಕ್ಕಿ ತಪ್ಪಿಸಲು ಹೋಗಿ ವೀಣಾ ಕಾಶಪ್ಪನವರ್‌ ಪ್ರಯಾಣಿಸುತ್ತಿದ್ದ ಕಾರು, ಮುಂದಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ವ್ಯಕ್ತಿ ಹಾಗೂ ಬೈಕ್‌ ಸವಾರನಿಗೆ ಗಾಯಗಳಾಗಿವೆ. ವೀಣಾ ಕಾಶಪ್ಪನವರ್‌ಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ವಿಜಯಪುರಕ್ಕೆ ಆಗಮಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ವೀಣಾ ಅವರು ಕಾರಿನಲ್ಲಿ ವಿಜಯಪುರಕ್ಕೆ ಬರುತ್ತಿದ್ದರು. ಈ ವೇಳೆ ಈ ಅವಘಡ ನಡೆದಿದೆ.

Share Post