DistrictsPolitics

ತುಮಕೂರಿನಲ್ಲಿ ಕಾಂಗ್ರೆಸ್‌ ಪ್ರಜಾಧ್ವನಿ ಸಮಾವೇಶ

ತುಮಕೂರು; ಇಂದು ತುಮಕೂರು ನಗರದ ಅಮಾನಿಕೆರೆಯ ಗಾಜಿಮನೆಯಲ್ಲಿ ಕಾಂಗ್ರೆಸ್​ ಪ್ರಜಾಧ್ವನಿ ​ ಸಮಾವೇಶ ನಡೆಯುತ್ತಿದೆ.

    ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿದೆ. ಬಳಿಕ ಟೌನ್​ಹಾಲ್​​​​ನಿಂದ ಅಮಾನಿಕೆರೆವರೆಗೂ ಮೆರವಣಿಗೆ ನಡೆಯಲಿದೆ. ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್​​, ಜಿ.ಪರಮೇಶ್ವರ್​​, ವಿಧಾನ ಪರಿಷತ್​ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ಶಾಸಕರು, ಮುಖಂಡರು ಭಾಗಿಯಾಗಲಿದ್ದಾರೆ. ಸಮಾವೇಶದಲ್ಲಿ 25 ಸಾವಿರ ಕಾರ್ಯಕರ್ತರು ಸೇರಿದ್ದಾರೆ. 

 

Share Post