DistrictsPolitics

ಕಾಂಗ್ರೆಸ್‌ ಹೋರಾಟ ಮಾಡುತ್ತಿರುವುದು ದುರಂತ; ಸಿಎಂ ಬೊಮ್ಮಾಯಿ

ದಾವಣಗೆರೆ; ರಾಹುಲ್‌ ಗಾಂಧಿ ವಿಚಾರಣೆ ಮಾಡುತ್ತಿರುವುದಕ್ಕೆ ಕಾಂಗ್ರೆಸ್‌ನವರು ಹೋರಾಟ ಮಾಡುತ್ತಿರುವುದು ದುರಂತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದ್ದೇ ಕಾಂಗ್ರೆಸ್‌ ಎಂದು ಆಪಾದಿಸಿದರು.

ರಾಹುಲ್‌ ಗಾಂಧಿ ವಿರುದ್ಧ ಆರೋಪವಿರುವುದರಿಂದ ವಿಚಾರಣೆ ಮಾಡಲಾಗುತ್ತಿದೆ. ಅದರ ವಿರುದ್ಧ ಪ್ರತಿಭಟನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿರುವ ಸಿಎಂ ಬೊಮ್ಮಾಯಿ, ದೇಶದ ಜನರು ಕಾಂಗ್ರೆಸ್‌ ಪಕ್ಷವನ್ನು ತಿರಸ್ಕಾರ ಮಾಡಿದ್ದಾರೆ ಎಂದರು. ಅಷ್ಟಕ್ಕೂ ಕಾಂಗ್ರೆಸ್‌ ಬೇರೆ ಕಾರಣಗಳಿಗಾಗಿ ಪ್ರತಿಭಟನೆ ಮಾಡುತ್ತಿದೆ. ವಿನಾಕಾರಣ ನಮ್ಮ ಮೇಲೆ ಆರೋಪ ಮಾಡುತ್ತಿದೆ. ಆದ್ರೆ, ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದೇ ಕಾಂಗ್ರೆಸ್‌ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ.

Share Post