Districts

ಈಶ್ವರಪ್ಪ ಬಂಧನಕ್ಕೆ ಆಗ್ರಹ; ಹೊಸಪೇಟೆಯಲ್ಲಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಹೊಸಪೇಟೆ; ಹೊಸಪೇಟೆಯಲ್ಲಿ ಇಂದಿನಿಂದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ನಡೆಯುತ್ತಿದೆ. ಹೊಸಪೇಟೆಯ ಆಂಜನೇಯ ದೇಗುಲ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಿಣಿ ನಡೆಯುತ್ತಿದೆ. ಆದ್ರೆ, ಇದಕ್ಕೆ ಪ್ರತಿಭಟನೆ ತಲೆಬಿಸಿ ಶುರುವಾಗಿದೆ. ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆಗೆ ಈಶ್ವರಪ್ಪ ಕಾರಣ, ಹೀಗಾಗಿ ಅವರನ್ನು ಬಂಧಿಸಬೇಕೆಂದು ಕಾಂಗ್ರೆಸ್‌ ಆಗ್ರಹಿಸುತ್ತಿದೆ. ಅದಕ್ಕಾಗಿ ಕಾಂಗ್ರೆಸ್‌ ಇಂದು ಹೊಸಪೇಟೆಯಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ.

ಬಿಜೆಪಿ ರಾಜ್ಯ ಕಾರ್ಯಕಾರಣಿ ನಡೆಯುತ್ತಿರುವಾಗಲೇ ಕಾಂಗ್ರೆಸ್‌ ಬೃಹತ್‌ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. ಇದು ಬಿಜೆಪಿ ನಾಯಕರಿಗೆ ಇರಿಸುಮುರಿಸು ತಂದೊಡ್ಡಿದೆ.

Share Post