DistrictsPolitics

ಸತೀಶ್‌ ಜಾರಕಿಹೊಳಿ ಹೇಳಿಕೆ; ಬದ್ಧತೆ ಇದ್ದರೆ ಕ್ರಮ ಕೈಗೊಳ್ಳಿ – ಸಿಎಂ ಬೊಮ್ಮಾಯಿ ಸವಾಲ್‌

ಬೆಳಗಾವಿ; ಕಾಂಗ್ರೆಸ್‌ ಪಕ್ಷಕ್ಕೆ ಬದ್ಧತೆ ಅನ್ನೋದು ಇದ್ದರೆ ಹಿಂದೂ ಪದದ ಅರ್ಥದ ವಿಚಾರವಾಗಿ ವಿವಾದಿತ ಹೇಳಿಕೆ ನೀಡಿರುವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸವಾಲ್‌ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಸತೀಶ್‌ ಅವರು ತಮ್ಮ ಹೇಳಿಕೆ ಹಿಂಪಡೆಯೋದಿಲ್ಲ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಏನನ್ನೂ ಹೇಳದೇ ನುಣಿಚಿಕೊಳ್ತಿದ್ದಾರೆ. ಕಾಂಗ್ರೆಸ್‌ ಪಕ್ಷ ಸತೀಶ್‌ ಜಾರಕಿಹೊಳಿ ಹೇಳಿಕೆಯನ್ನು ಒಪ್ಪುವುದಿಲ್ಲ ಎಂದು ಹೇಳುತ್ತಿದೆ. ಆದ್ರೆ, ಆ ಪಕ್ಷಕ್ಕೆ ಬದ್ಧತೆ ಇದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ನೋಡೋನ ಎಂದು ಆಗ್ರಹಿಸಿದರು.

ಸತೀಶ್ ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ತನ್ನ ಸ್ಪಷ್ಟನೆ ನೀಡಬೇಕು. ಈ ವಿಚಾರವನ್ನು ಬಿಜೆಪಿ ಹೇಗೆ ತೆಗೆದುಕೊಂಡು ಹೋಗುತ್ತೆ ಅನ್ನೋದು ಮುಖ್ಯವಲ್ಲ, ಕಾಂಗ್ರೆಸ್‌ ಇದನ್ನು ಹೇಗೆ ತೆಗೆದುಕೊಂಡು ಹೋಗುತ್ತೆ ಅನ್ನೋದು ಮುಖ್ಯ ಎಂದರು. ಇಂಟರ್ನೆಟ್‌ನಲ್ಲಿ ಹಲವು ವಿಚಾರಗಳಿರುತ್ತವೆ. ಅವೆಲ್ಲವೂ ಸತ್ಯವಾಗಿರುವುದಿಲ್ಲ. ಸಾರ್ವಜನಿಕ ಜೀವನದಲ್ಲಿರುವವರು ಗಟ್ಟಿ ಆಧಾರವಿಟ್ಟುಕೊಂಡು ಮಾತನಾಡಬೇಕು ಎಂದು ಸಿಎಂ ಇದೇ ವೇಳೆ ತಿಳಿಸಿದರು.

 

Share Post