CrimeDistricts

ಕಂಟೈನರ್‌ಗೆ ಬಸ್‌ ಡಿಕ್ಕಿ; ಏಳು ಪ್ರಯಾಣಿಕರು ಸಜೀವ ದಹನ

ಕಲಬುರಗಿ; ಕಲಬುರಗಿಯ ಕಮಲಾಪುರದ ಬಳಿ ಭೀಕರ ಅಪಘಾತ ನಡೆದಿದೆ. ಖಾಸಗಿ ಬಸ್ ಹಾಗೂ ಕಂಟೈನರ್ ಮುಖಾಮುಖಿ ಡಿಕ್ಕಿಯಾಗಿದ್ದು, ಮೃತರ ಸಂಖ್ಯೆ ಏಳಕ್ಕೆ ಏರಿದೆ. ಡಿಕ್ಕಿಯ ರಭಸಕ್ಕೆ ಬಸ್‌ಗೆ ಬೆಂಕಿ ತಗುಲಿದ್ದು, ಆರು ಮಂದಿ ಸಜೀವದಹನವಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಕೂಡಾ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕಲಬುರಗಿಯ ಕಮಲಾಪುರ ಹೊರವಲಯದಲ್ಲಿ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ 22ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗೋವಾದಿಂದ ಹೈದ್ರಾಬಾದ್‍ಗೆ ಈ ಬಸ್ ಸಂಚರಿಸುತ್ತಿತ್ತು.  ಬಸ್‍ನಲ್ಲಿ ಒಟ್ಟು 29 ಜನ ಪ್ರಯಾಣಿಕರಿದ್ದರೆಂದು ತಿಳಿದುಬಂದಿದ್ದು, ಉಳಿದವರನ್ನು ರಕ್ಷಿಸಲಾಗಿದೆ.

ಅಗ್ನಿಶಾಮಕದಳದ ಅಧಿಕಾರಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. 22 ಜನ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share Post