Districts

ಬಿಜೆಪಿ ಸೇರುತ್ತೇನೆ ಎಂದ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ಜೆಡಿಎಸ್‌ನ ಹಿರಿಯ ನಾಯಕ ಹಾಗೂ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರುವುದು ಪಕ್ಕಾ ಆಗಿದೆ. ಅವರೇ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ. ಶಿಕ್ಷಕರ ಕ್ಷೇತ್ರದಿಂದ ಪರಿಷತ್‌ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ನಾನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ. ಹುಬ್ಬಳ್ಳಿ ಮಾತನಾಡಿದ ಅವರು ಈ ಬಗ್ಗೆ ಈಗಾಗಲೇ ಬಿಜೆಪಿ ಹಿರಿಯ ನಾಯಕರ ಜೊತೆ ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ.

ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡುವಂತೆ ಆ ಪಕ್ಷದ ನಾಯಕರು ಆಹ್ವಾನ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಪರಿಷತ್‌ ಚುನಾವಣಾ ದಿನಾಂಕ ಘೋಷಣೆಯಾದ ಮೇಲೆ ನಾನು ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ಹೊರಟ್ಟಿ ಹೇಳಿದರು.

Share Post