DistrictsPolitics

ಸಿದ್ದರಾಮೋತ್ಸವಕ್ಕೆ ಕ್ಷಣಗಣನೆ; ಲಕ್ಷಾಂತರ ಅಭಿಮಾನಿಗಳು ಭಾಗಿ

ದಾವಣಗೆರೆ; ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದಾರೆ. ದಾವಣಗೆರೆಯಲ್ಲಿ ಎಲ್ಲೆಲ್ಲೂ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಹತ್ತಾರು ಕಿಲೋ ಮೀಟರ್‌ ವರೆಗೆ ವಾಹನಗಳು ನಿಂತಿವೆ.

ಇನ್ನು ಬೆಳಗ್ಗೆಯಿಂದಲೇ ಬಂದವರಿಗೆ ತಿಂಡಿ ವ್ಯವಸ್ಥೆ ಮಾಡಲಾಗಿದೆ. ಸುಮಾರು ಮೂರು ಲಕ್ಷ ಜನಕ್ಕೆ ತಿಂಡಿ ವ್ಯವಸ್ಥೆ ಮಾಡಲಾಗಿದ್ದು, 400 ಕೌಂಟರ್‌ಗಳ ಮೂಲಕ ತಿಂಡಿ ವಿತರಣೆ ಮಾಡಲಾಗುತ್ತಿದೆ. ಎಲ್ಲೆಲ್ಲೂ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಅಭಿಮಾನಿಗಳು ಸಿದ್ದರಾಮಯ್ಯ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ಕಾಂಗ್ರೆಸ್‌ ನಾಯಕರೆಲ್ಲಾ ಪಾಲ್ಗೊಳ್ಳುತ್ತಿದ್ದಾರೆ.

Share Post