Districts

ಸಾಲಬಾಧೆಗೆ ದಂಪತಿ ಹೈರಾಣ; ವಿಷ ಸೇವಿಸಿ ಆತ್ಮಹತ್ಯೆ

ಮೈಸೂರು: ಸಾಲ ಹೆಚ್ಚಾಗಿದ್ದರಿಂದಾಗಿ ನೊಂದ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರು ನಗರದಲ್ಲಿ ನಡೆದಿದೆ. ಇಲ್ಲಿನ ಉದಯಗಿರಿಯ ಸಾಯಗಳ್ಳಿ ಲೇಔಟ್‌ನ ಸಂತೋಷ್‌ ಹಾಗೂ ಭವ್ಯಾ ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಎರಡು ವರ್ಷಗಳಿಂದೆ ಅಷ್ಟೇ ಇವರಿಬ್ಬರೂ ಮದುವೆಯಾಗಿದ್ದರು. ಆದ್ರೆ ಸಂತೋಷ್‌ ಕೆಲ ದಿನಗಳಿಂದ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಸಾಲ ಹೆಚ್ಚಾಗಿದ್ದರಿಂದ ಹೆದರಿದ್ದರು. ಈ ಕಾರಣದಿಂದಾಗಿ ಗಂಡ-ಹೆಂಡತಿ ಇಬ್ಬರೂ ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ದಾರೆ. ಅನ್ನಕ್ಕೆ ವಿಷ ಸೇರಿಸಿ, ಅದನ್ನು ಸೇವಿಸಿದ್ದಾರೆ. ಇದನ್ನು ನೋಡಿದ ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಸಾವನ್ನಪ್ಪಿದ್ದಾರೆ.

ಉದಯಗಿರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

 

Share Post