CrimeDistricts

ರೈತ ಮುಖಂಡ ಹಾಗೂ ಆತನ ಸಂಬಂಧಿ ಮೇಲೆ ಮಾರಣಾಂತಿಕ ಹಲ್ಲೆ..!

ಚಿಕ್ಕಬಳ್ಳಾಪುರ; ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿ ರೈತ ಮುಖಂಡರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಅಡ್ಡಬಂದ ರೈತ ಮುಖಂಡನ ಸಂಬಂಧಿ ಮೇಲೂ ದಾಳಿ ನಡೆಸಲಾಗಿದೆ. ಭಕ್ತರಹಳ್ಳಿ ಗ್ರಾಮದ ರೈತ ಮುಖಂಡ ಪ್ರತೀಶ್‌ ಹಾಗೂ ಅವರ ಬಾಮೈದ ಶಿವರಾಜ್‌ಕುಮಾರ್‌ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದವರು.

ಗ್ರಾಮದ ಉದಯ್ ಕಿರಣ್, ಗೋವಿಂದ ಹಾಗೂ ಹೇಮಂತ್ ಎಂಬುವವರು ಹಲ್ಲೆ ನಡೆಸಿದ್ದಾರೆಂದು ಹೇಳಲಾಗಿದೆ.  ರೈತ ಸಂಘದಲ್ಲಿ ಸಕ್ರಿಯನಾಗಿರುವ ಪ್ರತೀಶ್, ಇಂದು ಬೆಳಗ್ಗೆ ವಾಕಿಂಗ್ ಮುಗಿಸಿ ಮನೆಗೆ ಬರುತ್ತಿದ್ದಾಗ ಉದಯ್ ಕಿರಣ್ ಎಂಬಾತ ಚಾಕುವಿನಿಂದ ದಾಳಿ ಮಾಡಿದ್ದಾನೆ. ಈ ವೇಳೆ ಅಡ್ಡಬಂದ ಶಿವರಾಜ್‌ಕುಮಾರ್‌ ಮೇಲೂ ದಾಳಿ ನಡೆದಿದೆ.

ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಶಿಡ್ಲಘಟ್ಟ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹಳೆಯ ದ್ವೇಷ ಹಾಗೂ ಜಮೀನು ವಿವಾದದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ಹೇಳಲಾಗುತ್ತಿದೆ.

 

Share Post