CrimeDistrictsHealth

ಮುರುಘಾ ಶ್ರೀಗಳನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸ್ಥಳಾಂತರಕ್ಕೆ ನಿರ್ಧಾರ

ಚಿತ್ರದುರ್ಗ; ಮುರುಘಾ ಶ್ರೀಗಳಿಗೆ ಹೃದಯ ಸಮಸ್ಯೆ ಇದೆ. ಇಸಿಜಿಯಲ್ಲಿ ಈ ಬಗ್ಗೆ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾಸ್ಪತ್ರೆ ಸರ್ಜನ್‌ ಡಾ.ಬಸವರಾಜು ತಿಳಿಸಿದ್ದಾರೆ.

ಶ್ರೀಗಳಿಗೆ ಇಸಿಜಿ, ಎಂಆರ್‌ಐ, ಸಿಟಿ ಸ್ಲ್ಯಾನ್‌ ಮಾಡಿಸಲಾಗಿತ್ತು. ದಾವಣಗೆರೆಯಿಂದ ಬಂದಿದ್ದ ಇಬ್ಬರು ಹೃದ್ರೋಗ ತಜ್ಞರು ಕೂಡಾ ಶ್ರೀಗಳಿಗೆ ತಪಾಸಣೆ ನಡೆಸಿದರು. ತಜ್ಞರು ಶ್ರೀಗಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸುವಂತೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀಗಳನ್ನು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲು ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾ ಸರ್ಜನ್‌ ಡಾ.ಬಸವರಾಜು ತಿಳಿಸಿದ್ದಾರೆ.

Share Post