DistrictsPolitics

ಅತೃಪ್ತ ನಾಯಕ ಲಕ್ಷ್ಮಣ ಸವದಿಗೆ ಗಾಳ ಹಾಕಿದ ಕಾಂಗ್ರೆಸ್‌; ರಾಜು ಕಾಗೆ ಭೇಟಿ

ಅಥಣಿ; ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರು ಟಿಕೆಟ್‌ ಸಿಗದಿದ್ದಕ್ಕೆ ಬೇಸತ್ತು ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್‌ ಸವದಿಯವರಿಗೆ ಗಾಳ ಹಾಕಿದೆ. ಸವದಿಯವರು ಸುದ್ದಿಗೋಷ್ಠಿ ನಡೆಸಿ ತಮ್ಮ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಕಾಗವಾಡ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಕಾಗೆ ಅವರು ಲಕ್ಷ್ಮಣ ಸವದಿಯವರನ್ನು ಭೇಟಿ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಬರುವಂತೆ ಸವದಿಯವರಿಗೆ ಆಹ್ವಾನ ನೀಡಿದ್ದಾರೆ.

ಸವದಿಯವರ ಭೇಟಿ ಬಳಿಕ ಮಾತನಾಡಿರುವ ಕಾಂಗ್ರೆಸ್‌ ಅಭ್ಯರ್ಥಿ ರಾಜು ಕಾಗೆಯವರು, ಸವದಿಯವರು ಕಾಂಗ್ರೆಸ್‌ಗೆ ಬಂದರೆ ಒಳ್ಳೆಯದಾಗುತ್ತೆ. ಅವರಿಗೆ ಕಾಂಗ್ರೆಸ್‌ನಲ್ಲಿ ಒಳ್ಳೆಯ ಸ್ಥಾನಮಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ನಾವಿಬ್ಬರೂ ಒಟ್ಟಿಗೆ ಹೋದರೆ ತಾಲ್ಲೂಕಿನಲ್ಲಿ ಒಳ್ಳೆಯದಾಗುತ್ತದೆ. ಹೀಗಾಗಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಒಂದು ವೇಳೆ ನಾನು ಗೆದ್ದು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ನನಗೆ ಸಚಿವ ಸ್ಥಾನ ಸಿಕ್ಕರೆ ಅದನ್ನು ಸವದಿಗೆ ತ್ಯಾಗ ಮಾಡುತ್ತೇನೆ ಎಂದೂ ಇದೇ ವೇಳೆ ರಾಜು ಕಾಗೆ ಹೇಳಿದ್ದಾರೆ.

 

Share Post