DistrictsPolitics

ಜನಧ್ವನಿ ಯಾತ್ರೆ ಜನರ ಧ್ವನಿ ಎಂದ ಡಿ.ಕೆ.ಶಿವಕುಮಾರ್‌

ಮೈಸೂರು; ಇದು ಕಾಂಗ್ರೆಸ್‌ ಪಕ್ಷದ ಯಾತ್ರೆಯಲ್ಲ, ಜನ ಧ್ವನಿಯಾತ್ರೆ ಜನರ ನೋವುಗಳಿಗೆ ನಾವು ಧ್ವನಿಯಾಗುತ್ತಿದ್ದೇವೆ. ಹೀಗಾಗಿ ನಮ್ಮ ಯಾತ್ರೆಗೆ ಎಲ್ಲಾ ಕಡೆ ಭಾರಿ ಜನಬೆಂಬಲ ವ್ಯಕ್ತವಾಗುತ್ತಿದೆ ಅಂತ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಈ ಯಾತ್ರೆ ಮಾಡುತ್ತಿದ್ದೇವೆ. ಏನಾದರೂ ಮಾಡಿ ಈ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕೆಂದು ಜನರು ಸಹ ಸಂಕಲ್ಪ‌ ಮಾಡಿದ್ದಾರೆ. ಜನರು ನಮಗೆ ಕೊಟ್ಟ ಸ್ವಾಗತ ಇಡೀ ರಾಜ್ಯದ ಜನರಿಗೆ ಕೊಟ್ಟ ಸ್ವಾಗತವಾಗಿದೆ. ಮೈಸೂರು ಚಾಮರಾಜನಗರ ಜಿಲ್ಲೆಯ 15 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಿಸುವುದಾಗಿ ಕೊಟ್ಟಿರುವ ಸ್ವಾಗತವಾಗಿದೆ ಎಂದು ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್ ಗೆ ಬೆಂಬಲ ಕೊಟ್ಟೆವು. ಆದರೆ ಕುಮಾರಸ್ವಾಮಿಗೆ ಅಧಿಕಾರ ಉಳಿಸಿಕೊಳ್ಳಲಾಗಲಿಲ್ಲ. ಕುಮಾರಸ್ವಾಮಿ ಎರಡು ಬಾರಿ ಸಿಎಂ ಆದರೂ ಅಧಿಕಾರ ಉಳಿಸಿಕೊಳ್ಳಲು ಆಗಲಿಲ್ಲ. ಹಾಗಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಮಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡುತ್ತೇನೆ ಎಂದು ಡಿಕೆಶಿ ಹೇಳಿದರು.

Share Post