DistrictsPolitics

ಸಚಿವ ಸಂಪುಟವನ್ನು ದುರ್ಬಳಕೆ ಮಾಡಿಕೊಳ್ತಿರುವ ಮೊದಲ ವ್ಯಕ್ತಿ ಡಿ.ಕೆ.ಶಿವಕುಮಾರ್‌; ಈಶ್ವರಪ್ಪ

ಶಿವಮೊಗ್ಗ; ಸಚಿವ ಸಂಪುಟವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಮೊದಲ ವ್ಯಕ್ತಿ ಡಿ.ಕೆ.ಶಿವಕುಮಾರ್‌ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಡಿ.ಕೆ.ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆ ಆದೇಶವನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧಾರ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ ಎಂದು ಕಿಡಿಕಾರಿದ್ದಾರೆ.

ಕಳ್ಳ ಯಾವತ್ತಿದ್ದರೂ ಕಳ್ಳನೇ ಎಂದಿರುವ ಈಶ್ವರಪ್ಪ, ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ಇದೊಂದು ಕಪ್ಪು ಚುಕ್ಕೆ ಎಂದು ಜರಿದಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರು ಕಾನೂನು ಸಂಕಷ್ಟದಿಂದ ಉಳಿಸುವ ಸಲುವಾಗಿ ಸಿದ್ದರಾಮಯ್ಯ ಅವರು ಕಪ್ಪು ಚುಕ್ಕೆ ಅಂಟಿಸಿಕೊಂಡಿದ್ದಾರೆ ಎಂದೂ ಈಶ್ವರಪ್ಪ ಹೇಳಿದ್ದಾರೆ.

Share Post