Districts

ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ದೊಡ್ಡ ಷಡ್ಯಂತ್ರ ನಡೆದಿತ್ತು; ಡಿ.ಕೆ.ಶಿವಕುಮಾರ್‌

ರಾಮನಗರ: ಶಿವಮೊಗ್ಗ ಹರ್ಷ ಕೊಲೆ ಪ್ರಕರಣದ ನಂತರ ದೊಡ್ಡ ಷಡ್ಯಂತ್ರ ಮಾಡಲಾಗಿತ್ತು. ಈ ಮೂಲಕ ರಾಜ್ಯದಲ್ಲಿ ಅಶಾಂತಿ ಸೃಷ್ಟಿ ಮಾಡುವ ಹುನ್ನಾರವಿತ್ತು.  ಆದ್ರೆ ಶಿವಮೊಗ್ಗ ಪೊಲೀಸರು ಬುದ್ಧಿವಂತರಿದ್ದಾರೆ. ಹೀಗಾಗಿ ಶಿವಮೊಗ್ಗ ಪೊಲೀಸರನ್ನು ನಾನು ಅಭಿನಂದಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಶಾಂತಿ ಸೃಷ್ಟಿಸೋದಕ್ಕಾಗಿ ದೊಡ್ಡ ಷಡ್ಯಂತ್ರ ಮಾಡಲಾಗಿತ್ತು. ಈ ದೊಡ್ಡ ಷಡ್ಯಂತ್ರ ಹಿಂದೆ ಒಂದು ಟ್ರಸ್ಟ್‌ ಇದೆ.ಈ ಟ್ರಸ್ಟ್‌ನಲ್ಲಿ ದೊಡ್ಡ ದೊಡ್ಡವರೆಲ್ಲಾ ಸದಸ್ಯರಾಗಿದ್ದಾರೆ. ಆದಷ್ಟು ಬೇಗ ಆ ದೊಡ್ಡವರ ಹೆಸರುಗಳು ಹೊರಬರುತ್ತವೆ ಎಂದು ಡಿ.ಕೆ.ಶಿವಕುಮಾರ್‌ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

 

Share Post