DistrictsPolitics

ಡಿಕೆಶಿ ಧರ್ಮಸ್ಥಳ ಭೇಟಿ ರದ್ದು; ಸಂಜೆ ದೆಹಲಿಯಲ್ಲಿ ಸಭೆ

ಶೃಂಗೇರಿ; ಮೂರನೇ ಪಟ್ಟಿ ಅಂತಿಮಗೊಳಿಸುವ ಸಂಬಂಧ ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕರು ಇಂದು ಸಂಜೆ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಧರ್ಮಸ್ಥಳ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಶೃಂಗೇರಿಯಿಂದ ಅವರು ಬೆಂಗಳೂರಿಗೆ ವಾಪಾಸ್ಸಾಗುತ್ತಿದ್ದು, ಬೆಂಗಳೂರಿನಿಂದ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಲಾಗಿತ್ತು. ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಲಾಗಿದೆ. ಉಳಿದಂತೆ 58 ಕ್ಷೇತ್ರಗಳಿಗೆ ಟಿಕೆಟ್‌ ಅನೌನ್ಸ್‌ ಮಾಡಬೇಕಾಗಿದೆ. ಇದಕ್ಕಾಗಿ ಕಾಂಗ್ರೆಸ್‌ ಕಸರತ್ತು ನಡೆಸುತ್ತಿದೆ, ಈ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ಭಾರೀ ಪೈಪೋಟಿ ಇದೆ. ಒಂದು ಕ್ಷೇತ್ರದಲ್ಲಿ ಮೂರು ನಾಲ್ಕು ಪ್ರಬಲ ಅಭ್ಯರ್ಥಿಗಳಿದ್ದಾರೆ. ಅದರಲ್ಲಿ ಒಬ್ಬೊಬ್ಬರನ್ನು ಆಯ್ಕೆ ಮಾಡಬೇಕಿದೆ. ಇನ್ನೊಂದೆಡೆ ಎರಡನೇ ಪಟ್ದಟಿ ಬಿಡುಗಡೆಯಾದ ಮೇಲೆ ಹಲವು ಕ್ಷೇತ್ರಗಳಲ್ಲಿ ಭಿನ್ನಮತ ಶುರುವಾಗಿದೆ. ಈಗಾಗಲೇ ಹಲವರು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡೋದಕ್ಕೂ ಹಲವು ಸಿದ್ಧತೆ ನಡೆಸಿದ್ದಾರೆ. ಈ ವಿಚಾರದ ಬೆಗ್ಗೆಯೂ ಸಂಜೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

Share Post