Districts

ಮೀಸಲಾತಿ ವಿಚಾರ ಸರ್ಕಾರದ ಕಣ್ಣೊರೆಸುವ ತಂತ್ರ; ಡಿಕೆಶಿ

ಹುಬ್ಬಳ್ಳಿ; ಮೀಸಲಾತಿ ವಿಚಾರದಲ್ಲಿ ಸರ್ಕಾರ ಜನಕ್ಕೆ ಚಾಕೊಲೋಟ್‌ ಕೊಡೋಕೆ ಹೊರಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಲೇವಡಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಮೀಸಲಾತಿ ವಿಚಾರ ಸರ್ಕಾರದ ಕಣ್ಣೊರೆಸುವ ತಂತ್ರ ಎಂದು ಹೇಳಿದರು. 

ನಾವು ಯಾರೂ ಭಿಕ್ಷುಕರಲ್ಲ. ನಮ್ಮ ಹೋರಾಟ ಮುಂದುವರೆಯುತ್ತದೆ. ಜನರಿಗೆ ನ್ಯಾಯ ದೊರಕಿಸಿಕೊಡುವುದೇ ನಮ್ಮ ಉದ್ದೇಶ ಎಂದು ಡಿ.ಕೆ.ಶಿವಕುಮಾರ್‌ ಇದೇ ವೇಳೆ ತಿಳಿಸಿದರು.

ಮಹದಾಯಿ ವಿಚಾರದಲ್ಲಿ ಬಿಜೆಪಿಯವರು ಉತ್ತರ ಕರ್ನಾಟಕದ ಜನರಿಗೆ ದ್ರೋಹ, ಮೋಸ ಮಾಡುತ್ತಿದ್ದಾರೆ. ತ್ರಿಬಲ್ ಇಂಜಿನ್ ಸರ್ಕಾರ ಜನರಿಗೆ ನ್ಯಾಯ ಒದಗಿಸಬೇಕು. ಅದು ಬಿಟ್ಟು ಜನ ನಮಗೆ ಬೆಂಬಲ ನೀಡುತ್ತಾರೆ ಎಂದು ತರಾತುರಿಯಲ್ಲಿ ದಿನಾಂಕವಿಲ್ಲದ ಕಾಗದ ತೋರಿಸಿದ್ದಾರೆ. ರಾಜಕೀಯ ಲಾಭಕೊಸ್ಕರ ಸುಳ್ಳು ಹೇಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.

Share Post