CrimeDistricts

ಬೆಳಗಾವಿಯಲ್ಲಿ ಇಬ್ಬರು ರೌಡಿಗಳ ಭೀಕರ ಹತ್ಯೆ

ಬೆಳಗಾವಿ; ಬೆಳಗಾವಿಯಲ್ಲಿ ಇಬ್ಬರು ರೌಡಿಗಳ ಬರ್ಬರ ಹತ್ಯೆ ನಡೆದಿದೆ. ಸುಳೇಭಾವಿ ಗ್ರಾಮದಲ್ಲಿ ಈ ಕೃತ್ಯ ಎಸಗಲಾಗಿದೆ.

ಇದೇ ಗ್ರಾಮದ ಮಹೇಶ್ ಮುರಾರಿ (28) ಹಾಗೂ ಪ್ರಕಾಶ್ ಹುಂಕರಿ ಪಾಟೀಲ್ (24) ಕೊಲೆಗೀಡಾದವರು. ನಿನ್ನೆ ರಾತ್ರಿ ಕೆಲ ಪಡ್ಡೆ ಹುಡುಗರು ಸುಳೇಭಾವಿ ಗ್ರಾಮದ ಲಕ್ಷ್ಮಿ ಗಲ್ಲಿಯ ಶಿವಾಜಿ ಪ್ರತಿಮೆ ಬಳಿ ನಿಂತು ಹರಟೆ ಹೊಡೆಯುತ್ತಿದ್ದರು. ಎಂಟೂವರೆ ಗಂಟೆ ಸುಮಾರಿಗೆ ಕೈಯಲ್ಲಿ ಮಾರಕಾಸ್ತ್ರಗಳು ಹಾಗೂ ಖಾರದ ಪುಡಿ ಹಿಡಿದುಕೊಂಡು ಬಂದ 10ಕ್ಕೂ ಅಧಿಕ ಯುವಕರ ಗ್ಯಾಂಗ್ ಅಲ್ಲೇ ನಿಂತಿದ್ದವರ ಮೇಲೆ ದಾಳಿ ಮಾಡಿದೆ.

  ಈ ವೇಳೆ ಒಂದಷ್ಟು ಮಂದಿ ಪರಾರಿಯಾಗಿದ್ದಾರೆ. ಆದ್ರೆ ಇಬ್ಬರನ್ನು ಮಾತ್ರ ಎಲ್ಲಿಯೂ ಹೋಗದಂತೆ ದುಷ್ಕರ್ಮಿಗಳು ತಡೆದಿದ್ದಾರೆ. ಅವರ ಮೇಲೆ ಏಕಾಏಕಿ ಲಾಂಗ್​, ಮಚ್ಚುಗಳನ್ನು ಬೀಸಿದ್ದಾರೆ.  ಓರ್ವನನ್ನ ಶಿವಾಜಿ ವೃತ್ತದಲ್ಲೇ ಹತ್ಯೆ ಮಾಡಿದರೆ, ಇನ್ನೋರ್ವ ಅಲ್ಲಿಂದ ಎಸ್ಕೇಪ್ ಆಗಿ ಅಲ್ಲೇ ಇದ್ದ ಗಣಪತಿ ದೇವಸ್ಥಾನಕ್ಕೆ ಹೋಗಿ ಜೀವ ಉಳಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ ಮೊದಲೇ ಪ್ಲ್ಯಾನ್ ಮಾಡಿಕೊಂಡ ಆರೋಪಿಗಳು ದೇವಸ್ಥಾನದ ಕಟ್ಟೆಯ ಮೇಲೆಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

Share Post