CrimeDistricts

ವರದಕ್ಷಿಣೆ ಕಿರುಕುಳ; ಮಂಡ್ಯದಲ್ಲಿ ಗೃಹಿಣಿ ಆತ್ಮಹತ್ಯೆ

ಮಂಡ್ಯ; ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ಮನನೊಂದು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕು ಕಾರಿಗನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಮಧು ಎಂಬುವರ ಪತ್ನಿ ಸಹನ(35) ಆತ್ಮಹತ್ಯೆ ಮಾಡಿಕೊಂಡ ಗೃಹಣಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಸಹನಾ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಆತ್ಮಹತ್ಯೆ ಬಳಿಕ ಪತಿ ಮಧು ಹಾಗೂ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ. ಮೃತ ಗೃಹಿಣಿ ಸಹನ ಪೋಷಕರಿಂದ ವರದಕ್ಷಿಣೆ ಕಿರುಕುಳ ದೂರು‌ ದಾಖಲಾಗಿದೆ. ಇನ್ನು ಸಹನಾ ಆತ್ಮಹತ್ಯೆಯಿಂದಾಗಿ ಆಕ್ರೋಶಗೊಂಡ ಸಹನಾ ಕಡೆಯವರು ಆರೋಪಿ ಮಧು ಕಾರನ್ನು ಜಖಂಗೊಳಿಸಿದ್ದಾರೆ.

 

Share Post