CrimeDistricts

ಕುಡಿದು ಬಂದು ನಿತ್ಯ ಕಿರುಕುಳ; ತಂದೆಯಿಂದಲೇ ಮಗನ ಕೊಲೆ

ದೊಡ್ಡಬಳ್ಳಾಪುರ; ಮಗನೊಬ್ಬ ದಿನವೂ ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಎಂಬ ಕಾರಣಕ್ಕೆ ಸ್ವಂತ ತಂದಯೇ ಮಗನನ್ನು ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ಬಳಿ ನಡೆದಿದೆ. ದೊಡ್ಡ ಬಳ್ಳಾಪುರ ತಾಲ್ಲೂಕಿನ ವಾಣಿಗರಹಳ್ಳಿ ಗ್ರಾಮದ ಆದರ್ಶ್‌ ಎಂಬಾತನೇ ಕೊಲೆಯಾದ ಯುವಕ.

ಆದರ್ಶ್‌ ದಿನವೂ ಕುಡಿದು ಬಂದು ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ತಂದೆ ಜಯರಾಮಯ್ಯ ಮಗನನ್ನು ಕೊಲೆ ಮಾಡಿದ್ದಾರೆ. ಮಗನ ಕೈಕಾಲು ಕಟ್ಟಿಹಾಕಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ. ಇತ್ತೀಚೆಗೆ ಕುಡಿದುಬಂದಿದ್ದ ಆತ ತಾಯಿಯ ಬಳಿ ಹಣ ಕೇಳಿದ್ದಾನೆ. ತಾಯಿ ಕೊಡದಿದ್ದಕ್ಕೆ ಆಕೆಯ ಮೇಲೆ ಹಲ್ಲೆ ಮಾಡಿದ್ದನಂತೆ. ಇದ್ರಿಂದ ಬೇಸತ್ತಿದ್ದ ತಂದೆ, ರಾತ್ರಿ ಮಗನನ್ನು ಕೊಲೆ ಮಾಡಿದ್ದಾನೆ. ದೊಡ್ಡ ಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share Post