DistrictsPolitics

ದತ್ತಾ ಇಂಟರ್‌ನ್ಯಾಷನಲ್‌ ಪಕ್ಷ ಸೇರಲು ಹೋದವರು; ಹೆಚ್ಡಿಕೆ ವ್ಯಂಗ್ಯ

ಚಿಕ್ಕಮಗಳೂರು; ಜೆಡಿಎಸ್‌ ತೊರೆದು ಕಾಂಗ್ರೆಸ್‌ ಪಕ್ಷ ಸೇರಿದ್ದ ವೈಎಸ್‌ವಿ ದತ್ತಾಗೆ ಟಿಕೆಟ್‌ ನಿರಾಕರಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಯವರು, ನಮ್ಮದು ಸಣ್ಣ ಪಕ್ಷ. ಅವರು ಇಂಟರ್‌ನ್ಯಾಷನಲ್‌ ಪಕ್ಷ ಸೇರಲು ಹೋದವರು ಎಂದು ವ್ಯಂಗ್ಯವಾಡಿದ್ದಾರೆ.

ಬಿರೂರಿನಲ್ಲಿ ಮಾತನಾಡಿದ ಅವರು, ವೈಎಸ್‌ವಿ ದತ್ತ ಅವರ ಬಗ್ಗೆ ನನಗೆ ಗೊತ್ತಿಲ್ಲ. ಅವರೆಲ್ಲ ದೊಡ್ಡವರು ಎಂದು ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಈಗಾಗೇ ಕಡೂರು ಕ್ಷೇತ್ರಕ್ಕೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಆ ಅಭ್ಯರ್ಥಿ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿಲ್ಲದಿದ್ದರೆ ಅವರನ್ನು ಕರೆಸಿ ಚರ್ಚೆ ಮಾಡುತ್ತೇನೆ. ಅಭ್ಯರ್ಥಿ ಬದಲಾವಣೆ ಮಾಡಬೇಕಾದ ಸ್ಥಿತಿ ಬಂದರೆ ಅದನ್ನೂ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಹಾಸನ ಕ್ಷೇತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಚ್‌ಡಿಕೆ, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್‌ ನೀಡುತ್ತೇವೆ ಎಂದು ಹೇಳಿದರು.

 

Share Post