Districts

ಸಚಿವ ಡಾ.ಸುಧಾಕರ್‌ ಹುಟ್ಟೂರು ಪೇರೇಸಂದ್ರದಲ್ಲಿ ಕಂಪಿಸಿದ ಭೂಮಿ

ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹುಟ್ಟೂರಲ್ಲಿ ಭೂಕಂಪನವಾಗಿದೆ. ಇಂದು ಚಿಕ್ಕಬಳ್ಳಾಪುರ ಜಿಲ್ಲೆ ಪೇರೇಸಂದ್ರ ಗ್ರಾಮದ ಸುತ್ತಮುತ್ತ ಭೂಮಿ ಕಂಪಿಸಿದ್ದು, ಜನರು ಭಯಭೀತಗೊಂಡಿದ್ದಾರೆ. ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ. ಭಾರೀ ಶಬ್ದದ ಜೊತೆಗೆ ಭೂಮಿ ಕಂಪಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ನಿನ್ನೆ ಕೂಡಾ ಚಿಕ್ಕಬಳ್ಳಾಪುರದ ಸುತ್ತಮುತ್ತ ಭೂಮಿ ಕಂಪಿಸಿತ್ತು. ಅದು ರಿಕ್ಟರ್‌ ಮಾಪಕದಲ್ಲೂ ದಾಖಲಾಗಿತ್ತು. ಈ ಬೆನ್ನಲ್ಲೇ ಮತ್ತೊಮ್ಮೆ ಭೂಮಿ ಕಂಪಿಸಿದೆ. ಇದರಿಂದಾಗಿ ಚಿಕ್ಕಬಳ್ಳಾಪುರದ ಜನ ಭೀತಿಗೊಳಗಾಗಿದ್ದಾರೆ.

Share Post