Districts

ಮನೆಗೆ ನುಗ್ಗಿ ವೃದ್ಧ ದಂಪತಿಯ ಭೀಕರ ಕೊಲೆ

ದಾವಣಗೆರೆ: ಮನೆಯಲ್ಲಿ ಮಲಗಿದ್ದ ವೃದ್ಧ ದಂಪತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಕೃತ್ಯ ಇಲ್ಲಿನ ಎಲೆಬೇತೂರು ಗ್ರಾಮದಲ್ಲಿ ನಡೆದಿದೆ. ವೃದ್ಧ ದಂಪತಿಗಳನ್ನು ಬರ್ಬರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಪಕ್ಕದ ಮನೆಯವರು ಬಂದು ನೋಡಿದಾಗಿ ಈ ಕೃತ್ಯ ಬೆಳಕಿಗೆ ಬಂದಿದೆ.

ಎಂಬತ್ತು ವರ್ಷದ ಗುರುಸಿದ್ದಯ್ಯ ಹಾಗೂ ಎಪ್ಪತ್ತೈದು ವರ್ಷದ ಸರೋಜಮ್ಮ ಕೊಲೆಯಾದವರು. ಇವರಿಗೆ ಗಂಡು ಮಕ್ಕಳಿರಲಿಲ್ಲ. ಮೂವರು ಹೆಣ್ಣು ಮಕ್ಕಳಿದ್ದು, ಮೂವರಿಗೂ ಮದುವೆಯಾಗಿ ಗಂಡನ ಮನೆಗಳಲ್ಲಿ ವಾಸವಿದ್ದಾರೆ. ಹೀಗಾಗಿ ವೃದ್ಧ ದಂಪತಿಗಳಿಬ್ಬರೇ ಮನೆಯಲ್ಲಿದ್ದರು. ಕೃತ್ಯಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಪೊಲೀಸರು ಶ್ವಾನದಳ, ಬೆರಳಚ್ಚು ತಜ್ಞರೊಂದಿಗೆ ಆಗಮಿಸಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Share Post