CrimeDistricts

ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಸ್ಥಳದಲ್ಲೇ ಸಾವು

ಚಾಮರಾಜನಗರ; ರಸ್ತೆ ದಾಟುತ್ತಿದ್ದ ಹೆಣ್ಣಾನೆಗೆ ಲಾರಿ ಡಿಕ್ಕಿ ಹೊಡೆದಿದ್ದು, ಆನೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಬಂಡೀಪುರದಲ್ಲಿ ನಡೆದಿದೆ. ಆನೆ ಮೃತದೇಹ ರಸ್ತೆ ಮಧ್ಯದಲ್ಲೇ ಬಿದ್ದಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

ಬಂಡೀಪುರದ ಮದ್ದೂರು ವಲಯದ ಬಳಿ ಈ ದುರ್ಘಟನೆ ಸಂಭವಿಸಿದೆ. ಗುಂಡ್ಲುಪೇಟೆಯಿಂದ ಕೇರಳಕ್ಕೆ ತೆರಳುವ ಈ ರಸ್ತೆಯಲ್ಲಿ ರಾತ್ರಿ ವೇಳೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವೇ ಇಲ್ಲ. ಆದರೂ ಲಾರಿಯೊಂದರು ವೇಗವಾಗಿ ಸಂಚಾರ ಮಾಡಿದೆ. ಈ ವೇಳೆ ರ್ಸತೆ ದಾಟುತ್ತಿದ್ದ ಆನೆಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ತಮಿಳುನಾಡು ಮೂಲದ ಲಾರಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಚಾಲಕನನ್ನು ಕೂಡಾ ಅರಣ್ಯ ಸಿಬ್ಬಂದಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

Share Post