CrimeDistricts

ನಿಶ್ಚಿತಾರ್ಥವಾಗಿದ್ದ ಯುವತಿ ಮೇಲೆ ಅತ್ಯಾಚಾರ, ಬರ್ಬರ ಹತ್ಯೆ; ಯಾದಗಿರಿಯಲ್ಲಿ ದಾರುಣ

ಯಾದಗಿರಿ; ಐದು ದಿನಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಯುವತಿಯ ಮೇಲೆ ಅತ್ಯಾಚಾರವೆಸಗಿ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಯಾದಗಿರಿ ತಾಲ್ಲೂಕಿ ಕಂಚಗಾರನಹಳ್ಳಿ ಕ್ರಾಸ್‌ನಲ್ಲಿ ನಡೆದಿದೆ. ಮೂವತ್ತೈದು ವರ್ಷ ಸವಿತಾ ರಾಥೋಡ್‌ ಎಂಬಾಕೆಯೇ ಕೊಲೆಯಾದ ದುರ್ದೈವಿಯಾಗಿದ್ದಾಳೆ. ಸವಿತಾ ಅವರು ಮದ್ನಾಳ್‌ ತಂಡಾದ ನಿವಾಸಿ. ಸವಿತಾಳ ಕುತ್ತಿಗೆಗೆ ಚಾಕುವಿನಿಂದ ಇರಿದು ಈ ಕೊಲೆ ಮಾಡಲಾಗಿದೆ. ಕೊಲೆಗೂ ಮೊದಲು ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ತಿಳಿದುಬಂದಿದೆ.

ಸವಿತಾಗೆ ಹೆತ್ತವರು ಇರಲಿಲ್ಲ. ವಿಕಲಚೇತನ ಸಹೋದರನ ಜೊತೆ ಆಕೆ ವಾಸವಿದ್ದಳು. ಹೀಗಾಗಿಯೇ ಮದುವೆ ಕೂಡಾ ತಡವಾಗಿತ್ತು. ನಾಲ್ಕು ದಿನಗಳ ಹಿಂದೆ ವ್ಯಕ್ತಿಯೊಬ್ಬರ ಜೊತೆ ನಿಶ್ಚಿತಾರ್ಥವಾಗಿತ್ತು. ಅದಾದ ಮೇಲೆ ಶನಿವಾರ ಆಕೆ ಜಮೀನು ಕೆಲಸಕ್ಕೆ ಹೋಗಿದ್ದಳು. ಈ ವೇಳೆ ದುಷ್ಕರ್ಮಿಗಳು ಅಡ್ಡ ಹಾಕಿ ಈ ಕೃತ್ಯ ಎಸಗಿದ್ದಾರೆ. ಅತ್ಯಾಚಾರ ಎಸಗಿ ಚಾಕುವಿನಿಂದ ಇರಿಯಲಾಗಿತ್ತು. ಸಾವುಬದುಕಿನ ನಡುವೆ ಹೋರಾಡುತ್ತಿದ್ದ ಆಕೆಯನ್ನು ಕಲಬುರಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ.

Share Post