Districts

ಹರ್ಷ ಮನೆಗೆ ಸಚಿವ ಈಶ್ವರಪ್ಪ ಹಾಗೂ ನಳಿನ್‍ಕುಮಾರ್ ಕಟೀಲ್ ಭೇಟಿ, ಸಾಂತ್ವನ

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್ ಅವರು ಇಂದು, ಶಿವಮೊಗ್ಗದಲ್ಲಿ ಕೊಲೆಯಾಗಿರುವ ಹರ್ಷ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಾಥ್‌ ನೀಡಿದ್ರು. ಹರ್ಷ ಕುಟುಂಬಸ್ಥರೊಂದಗಿನ ಭೇಟಿ ಬಳಿಕ  ಮಾತನಾಡಿದ ಈಶ್ವರಪ್ಪ, ಹಿಂದೂ ಸಂಘಟನೆಯ ಹರ್ಷ ಕಗ್ಗೊಲೆ ಆಗುವ ಕಲ್ಪನೆ ನಮಗ್ಯಾರಿಗೂ ಇರಲಿಲ್ಲ. ಕಗ್ಗೊಲೆ ಆದ ತಕ್ಷಣ ಕೊಲೆಗಡುಕ ಗೂಂಡಾಗಳನ್ನು ರಾಜ್ಯ ಸರಕಾರ ಬಂಧಿಸಿದೆ. ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟೀಲ್ ಅವರು ಇಲ್ಲಿಗೆ ಬಂದು ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಸಹಕಾರದ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಕೊಲೆಗಡುಕರು ಮತ್ತು ಘಟನೆಯ ಹಿಂದಿರುವ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ರಾಜ್ಯ ಸರಕಾರದಿಂದಲೂ ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ ಎಂದ ಅವರು, ಹರ್ಷ ಕುಟುಂಬಕ್ಕೆ ನೆರವಾದ ಹಿಂದೂ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದರು.
ಈ ವಿಚಾರದಲ್ಲಿ ಆರೋಪ ಮಾಡಿದವರಿಗೆ ನಿಧಾನಕ್ಕೆ ಉತ್ತರ ಲಭಿಸಲಿದೆ. ಪಕ್ಷ ಮತ್ತು ಸರಕಾರ ಕೈಗೊಳ್ಳುವ ಕ್ರಮ ನಿಧಾನವಾಗಿ ಗೊತ್ತಾಗಲಿದೆ ಎಂದರು.

Share Post