DistrictsPolitics

Eshwarappa; ಕಾಂಗ್ರೆಸ್‌ ಪ್ರಣಾಳಿಕೆ ಸುಟ್ಟ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ಕಲಬುರಗಿ; ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಸಮಾಜದ ಶಾಂತಿ ಕದಡುವ ಸಂಘಟನೆಗಳನ್ನು ನಿಷೇಧ ಮಾಡುವುದಾಗಿ ಹೇಳಲಾಗಿದೆ. ಇದರಲ್ಲಿ ಉದಾಹರಣೆಯಾಗಿ ಭಜರಂಗದಳವನ್ನು ಹೆಸರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶಗಳು ಭುಗಿಲೆದ್ದಿವೆ. ಕಾಂಗ್ರೆಸ್‌ ಪ್ರಣಾಳಿಕೆಯನ್ನು ರಾಷ್ಟ್ರದ್ರೋಹಿ ಪ್ರಣಾಳಿಕೆ ಅಂತ ಮಾಜಿ ಸಚಿವ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಈಶ್ವರಪ್ಪ ಅವರು, ಕಾಂಗ್ರೆಸ್‌ ಪ್ರಣಾಳಿಕಯನ್ನು ಸುಟ್ಟು ಆಕ್ರೋಶ ಹೊರಹಾಕಿದರು. ಇದೇ ವೇಳೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರವಿದ್ದಾಗ, ಪಿಎಫ್‌ಐ ಮೇಲಿದ್ದ 173 ಪ್ರಕರಣಗಳನ್ನು ಹಿಂಪಡೆಯಲಾಗಿತ್ತು. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಭಯೋತ್ಪಾದಕ ಚಟುವಟಿಕೆಗಳಿಗೆ ಬೆಂಬಲ ನೀಡಿತ್ತು ಎಂದು ಈಶ್ವರಪ್ಪ ಆರೋಪಿಸಿದರು.

ಕಾಂಗ್ರೆಸ್‌ ಪಕ್ಷ ಭಜರಂಗದಳವನ್ನು ಮುಟ್ಟಿದೆ. ಈ ಕಾರಣಕ್ಕಾಗಿ ಅದಕ್ಕೆ ಯಾವ ಕಾರಣಕ್ಕೂ ಅಧಿಕಾರ ಸಿಗೋದಿಲ್ಲ ಎಂದು ಈಶ್ವರಪ್ಪ ಇದೇ ವೇಳೆ ಹೇಳಿದರು.

Share Post