Districts

ಸಚಿವ ಸ್ಥಾನ ಬಿಟ್ಟು, ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ- ಈಶ್ವರಪ್ಪ

ಹುಬ್ಬಳ್ಳಿ: ಎಂ.ಪಿ ರೇಣುಕಾಚಾರ್ಯ ಹೇಳಿಕೆಗೆ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸಚಿವ ಸ್ಥಾನವನ್ನು ಬಿಟ್ಟುಕೊಟ್ಟು, ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟದಿಂದ ನನ್ನನ್ನು ಕೈ ಬಿಡುವುದಿದ್ದರೆ ತಯಾರಿದ್ದೇನೆ. ಅಧಿಕಾರ ಎಷ್ಟು ಒಳ್ಳೆದು ಅಷ್ಟೇ ಕೆಟ್ಟದು ಎಂದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.
ಕಾರ್ಯಕಾರಿಣಿಯಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚೆಯಾಗಿವೆ. ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮಗೆ ದೊಡ್ಡ ಗೆಲುವುವಾಗಿದೆ. ಹೀಗಾಗಿ ರಾಜ್ಯದ ಜನತೆಗೆ ಧನ್ಯವಾದ ಹೇಳಬೇಕು.
ಇನ್ನು ಜನವರಿ ೫ ರಂದು ಹಿಂದುಳಿದ ವರ್ಗಗಳ ರಾಜ್ಯ ಕಾರ್ಯಕಾರಿಣಿ ಸಭೆ ಶಿವಮೊಗ್ಗದಲ್ಲಿ ನಡೆಯಲಿದೆ. ಆ ಸಭೆಯಲ್ಲಿ ನಾವು ಮುಂದಿನ ಚುನಾವಣೆಗಳ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದರು.

Share Post