DistrictsPolitics

ನನ್ನ ಹೆಣ ಕೂಡಾ ಬಿಜೆಪಿಗೆ ಹೋಗುವುದಿಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು; ಸಿದ್ದರಾಮಯ್ಯ ಅವರು ಬಿಜೆಪಿಗೆ ಹೋಗಲು ಸಿದ್ದರಾಗಿದ್ದರು. ಅಧಿಕಾರಕ್ಕಾಗಿ ಅವರು ಬಿಜೆಪಿ ಪಕ್ಷದ ಬಾಗಿಲು ತಟ್ಟಿದ್ದರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಜಿ.ಟಿ.ದೇವೇಗೌಡರು ಆರೋಪ ಮಾಡಿದ್ದರು. ಇದಕ್ಕೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನಾನಲ್ಲ. ನನ್ನ ಹೆಣ ಕೂಡಾ ಬಿಜೆಪಿಗೆ ಹೋಗೋದಿಲ್ಲ. ನಾನು ಬಿಜೆಪಿಗೆ ಹೋಗಲು ಸಿದ್ಧನಾಗಿದ್ದೆ ಎಂದರೆ ಯಾರಾದರೂ ನಂಬುತ್ತಾರಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು. ಯಾವುದೋ ಸಂದರ್ಭದಲ್ಲಿ ಯಾರ್ಯಾರನ್ನೋ ಯಾವುದೋ ಕಾರಣಕ್ಕೆ ಭೇಟಿ ಮಾಡಿರುತ್ತೇವೆ. ಇತ್ತೀಚೆಗೆ ನಾನು ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದೆ. ಈ ಹಿನ್ನೆಲೆ ಅಡ್ವಾಣಿಯವರನ್ನು ಭೇಟಿ ಮಾಡಿದ್ದೆ. ಹಾಗಂತ ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಲು ಆಗುತ್ತದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

Share Post