Districts

ಸಂಜೆ ಜಂಬೂ ಸವಾರಿ; 49 ಟ್ಯಾಬ್ಲೋಗಳು ರೆಡಿ

ಮೈಸೂರು; ಇಂದು ವಿಯದಶಮಿ. ಮೈಸೂರಿನಲ್ಲಿ ಇಂದು ವಿಶ್ವ ವಿಖ್ಯಾತ ಜಂಬೂ ಸವಾರಿ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳು ನಡೆದಿವೆ. ಸಂಜೆ 4.40ರಿಂದ 5 ಗಂಟೆ ನಡುವೆ ಸಿಎಂ ಸಿದ್ದರಾಮಯ್ಯ ಅವರು ಚಾಮುಂಡಿಗೆ ಪುಷ್ಪಾರ್ಚನೆ ಮೂಲಕ ದಸರಾ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಸತತ ನಾಲ್ಕನೇ ಬಾರಿಗೆ 750 ಕೆ.ಜಿ. ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಸಾಗಲಿದ್ದಾನೆ.

ಜಂಬೂಸವಾರಿಯಲ್ಲಿ 49 ಸ್ತಬ್ದಚಿತ್ರಗಳು, 95 ವಿವಿಧ ಕಲಾತಂಡಗಳು ಭಾಗಿಯಾಗಲಿವೆ. 31 ಜಿಲ್ಲೆಗಳ ಕಲೆ, ಸಂಸ್ಕೃತಿ ಪರಂಪರೆ ಪ್ರವಾಸಿತಾಣಗಳ ಸ್ತಬ್ದಚಿತ್ರಗಳು, ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ದಚಿತ್ರ, ಗ್ಯಾರಂಟಿ ಯೋಜನೆಯ ಟ್ಯಾಬ್ಲೋ ಸೇರಿದಂತೆ 49 ಸ್ತಬ್ದಚಿತ್ರಗಳ ಮೆರವಣಿಗೆಯಲ್ಲಿರಲಿವೆ.

 

Share Post