Districts

ನಂದಿನಿ ನಕಲಿ ತುಪ್ಪ ತಯಾರಿಕೆ: ನಾಲ್ವರ ವಿರುದ್ಧ ಎಫ್ಐಆರ್

ಮೈಸೂರು: ನಂದಿನಿ ನಕಲಿ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಪೊಲೀಸ್ ಹಾಗೂ ಆಹಾರ ಇಲಾಖೆಯಿಂದ ಪ್ರತ್ಯೇಕ ತನಿಖೆ ನಡೆಸಲಾಗುತ್ತಿದೆ. ಮೈಮುಲ್ ವ್ಯವಸ್ಥಾಪಕ ನಿರ್ದೇಶಕ ಬಿ.ಎಂ. ವಿಜಯ್ ಕುಮಾರ್ ದೂರಿನ ಮೇರೆಗೆ ವಂಚನೆ ಪ್ರಕರಣ ದಾಖಲಿಸಿದ್ದು, ತಮಿಳುನಾಡು ಮೂಲದ ಜೆ.ಪಿ.ನಗರದ ನಿವಾಸಿ ಮುರುಗೇಶ್, ಅಶ್ವಿನಿ, ರಾಯಚೂರು ಮೂಲದ ರಾಘವೇಂದ್ರ ನಗರದ ನಿವಾಸಿ ಎಲ್.ಕುಮಾರ್ ಮತ್ತು ಸಂತೋಷ್ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.ಕಳೆದ ಗುರುವಾರದಂದು ಹೊಸಹುಂಡಿ ಗ್ರಾಮದ ಹೊರವಲಯದಲ್ಲಿರುವ ನಕಲಿ ನಂದಿನಿ ತುಪ್ಪ ತಯಾರಿಕಾ ಘಟಕವನ್ನು ಸ್ಥಳೀಯರ ನೆರವಿನಿಂದ ಮಾನವ ‌ಹಕ್ಕು ಸಂಘಟನೆ ಸದಸ್ಯರು ದಾಳಿ ನಡೆಸಿದ್ದರು. ಆಹಾರ ಸುರಕ್ಷತೆ, ಗುಣಮಟ್ಟ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅಧಿಕಾರಿಗಳು ಪರಿಶೀಲನೆ ನಡೆಸಿ, ಕಲಬೆರಕೆ ಖಚಿತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಒಂದೂವರೆ ಟನ್​ನಷ್ಟು ಕಲಬೆರಕೆ ತುಪ್ಪ, 500 ಕೆಜಿ ವನಸ್ಪತಿ, 500 ಲೀಟರ್ ಪಾಮ್ ಆಯಿಲ್​​ನ್ನು ವಶಪಡಿಸಿಕೊಂಡು ಗೋಡೌನ್​ ಸೀಜ್ ಮಾಡಲಾಗಿತ್ತು.

Share Post