CrimeDistricts

ಕೌಟುಂಬಿಕ ಕಲಹ; ಕೆರೆಗೆ ಹಾರಿದ ಮೂವರು ಮಹಿಳೆಯರು

ರಾಮನಗರ; ಕೌಟುಂಬಿಕ ಕಲಹದಿಂದ ಬೇಸತ್ತು ಮೂವರು ಮಹಿಳೆಯರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಾಗಡಿ ಪಟ್ಟಣದ ಗೌರಮ್ಮನ ಕೆರೆ ಬಳಿ ನಡೆದಿದೆ. ಘಟನೆಯಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದಾರೆ. ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ.

ಐವತ್ತು ವರ್ಷದ ಶಾಂತಾಬಾಯಿ ಎಂಬುವವರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಮಹಿಳೆಯರಾದ ನಿರ್ಮಲಾಬಾಯಿ ಹಾಗೂ ಉಷಾಬಾಯಿಯವರನ್ನು ರಕ್ಷಣೆ ಮಾಡಲಾಗಿದೆ. ಮೂವರೂ ಒಂದೇ ಕುಟುಂಬದವರಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತೆಂದು ತಿಳಿದುಬಂದಿದೆ.

ಇವರು ಮಾಗಡಿ ಪಟ್ಟಣದ ನೇಯ್ಗೆ ಬೀದಿ ನಿವಾಸಿಗಳೆಂದು ತಿಳಿದುಬಂದಿದೆ. ಘಟನೆ ಸಂಬಂಧ ಮಾಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

 

Share Post