Districts

ತಾಯಿ, ಮಗಳು ಆತ್ಮಹತ್ಯೆ, ಯಾಕೆ ಗೊತ್ತಾ?

ಮಂಡ್ಯ : ಕೌಟುಂಬಿಕ ಕಲಹ ಹಿನ್ನೆಲೆ ಮೂರು ವರ್ಷದ ಮಗಳೊಂದಿಗೆ ತಾಯಿ ಸೇರಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗೋಸಾಯ್​ ಘಾಟ್​ ಬಳಿ ನಡೆದಿದೆ. ಪಾಂಡವಪುರ ತಾಲೂಕಿನ ಲಕ್ಷ್ಮಿ ಸಾಗರ ಗ್ರಾಮದ ನಿವಾಸಿಗಳಾದ ತಾಯಿ ಭಾರ್ಗವಿ (32), ಮಗಳು ದೀಕ್ಷಾ (03) ಮೃತರು. 5 ವರ್ಷಗಳ ಹಿಂದೆ ಶ್ರೀರಂಗಪಟ್ಟಣದ ದೇವೇಗೌಡನಕೊಪ್ಪಲು ಗ್ರಾಮದ ಪ್ರದೀಪ್​ ಕುಮಾರ್​ ಜೊತೆ ಭಾರ್ಗವಿ ಮದುವೆಯಾಗಿದ್ದರು. ಮೈಸೂರಿನ ಹೂಟಗಳ್ಳಿಯಲ್ಲಿ ವಾಸವಿದ್ದರು. ಗಂಡ-ಹೆಂಡತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದರಿಂದ ಬೇಸತ್ತು ಮಗಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share Post