CrimeDistricts

ಹೊಸಪೇಟೆ ಬಳಿ ಭೀಕರ ಅಪಘಾತ; ಏಳು ಮಂದಿ ದುರ್ಮರಣ

ವಿಜಯನಗರ; ವಿಜಯನಗರ ಜಿಲ್ಲೆ ಹೊಸ ಪೇಟೆ ಬಳಿ ಭೀಕರ ಅಪಘಾತ ನಡೆದಿದೆ. ಎರಡು ಲಾರಿ ಹಾಗೂ ಕ್ರೂಸರ್‌ ನಡುವೆ ಡಿಕ್ಕಿ ಸಂಭವಿಸಿದ್ದು, ಕ್ರೂಸರ್‌ನಲ್ಲಿದ್ದ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಲಾರಿಯೊಂದರ ಆಕ್ಸಲ್‌ ಕಟ್‌ ಆಗಿದ್ದರಿಂದ ಈ ಸರಣಿ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಲ್ಲಿ ಮೃತರೆಲ್ಲರೂ ಹೊಸಪೇಟೆ ಮೂಲದವರು. ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದರು.

 

Share Post