CrimeDistricts

ಮಿಡಿಗೇಶಿ ಬಳಿ ಭೀಕರ ಅಪಘಾತ; ಮೂವರು ದಾರುಣ ಸಾವು!

ತುಮಕೂರು; ತುಮಕೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಬಳಿ ಈ ದುರಂತ ನಡೆದಿದೆ. ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಡಿಕ್ಕಿ ಸಂಭವಿಸಿದೆ.

ಕಾರಿನಲ್ಲಿದ್ದ ಇಪ್ಪತ್ತು ವರ್ಷದ ಆಕಾಶ್‌, ಇಪ್ಪತ್ತೆಂಟು ವರ್ಷದ ಹೇಮಂತ್‌ ಹಾಗೂ ಶಿವಕುಮಾರ್‌ ಮೃತಪಟ್ಟವರು. ಕಾರಿನಲ್ಲಿದ್ದ ಉಜ್ವಲ್‌ ಎಂಬುವವರಿಗೆ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕಾರು ಬೆಂಗಳೂರಿನಿಂದ ಪಾವಗಡಕ್ಕೆ ತೆರಳುತ್ತಿತ್ತು. ಪಾವಗಡದಿಂದ ತುಮಕೂರಿಗೆ ಬರುತ್ತಿದ್ದ ಲಾರಿ ಹಾಗೂ ಈ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಮೃತರೆಲ್ಲರೂ ಪಾವಗಡ ತಾಲ್ಲೂಕಿನವರು ಎಂದು ತಿಳಿದುಬಂದಿದೆ. ಮಿಡಿಗೇಶಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share Post