CrimeDistricts

ನಾಗಮಂಗಲ ಬಳಿ ಭೀಕರ ಅಪಘಾತ; ನಾಲ್ವರ ದುರ್ಮರಣ

ಮಂಡ್ಯ; ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿಯೊಂದಕ್ಕೆ ಹಿಂಬದಿಯಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮಂಡ್ಯದ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿ ಈ ದುರಂತ ನಡೆದಿದೆ. ಕಾರಿನಲ್ಲಿದ್ದ ಹೇಮಂತ್, ಶರತ್, ನವೀನ್ ಎಂಬುವವರು ಸಾವನ್ನಪ್ಪಿದ್ದಾರೆ. ಮತ್ತೊಬ್ಬನ ಹೆಸರು ಗೊತ್ತಾಗಿಲ್ಲ. ನಾಲ್ವರೂ ಬೆಂಗಳೂರಿನ ನೆಲಮಂಗಲ ಮೂಲದವರಾಗಿದ್ದು, ಕಾರಿನಲ್ಲಿ ಹಾಸನಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ.

ಕಾರು ಅತಿವೇಗವಾಗಿ ಚಾಲನೆ ಮಾಡಲಾಗುತ್ತಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಅಪಘಾತವಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Share Post