CrimeDistricts

ಸಾತನೂರಿನ ಬಳಿ ಭೀಕರ ಅಪಘಾತ; ಆರು ಮಂದಿ ದುರ್ಮರಣ

ಬೆಂಗಳೂರು; ರಾಮನಗರ ಜಿಲ್ಲೆ ಸಾತನೂರು ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಸಾತನೂರಿನ ಕೆಮ್ಮಾಳೆ ಗೇಟ್‌ ಬಳಿ ಈ ದುರಂತ ನಡೆದಿದೆ. ಸರ್ಕಾರಿ ಬಸ್‌ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದವರು ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಿ ವಾಪಸ್‌ ಬರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

Share Post