Districts

ಹರ್ಷನ ಹತ್ಯೆ ಖಂಡಿಸಿ, ಫೆಬ್ರವರಿ 23 ರಂದು ರಾಜ್ಯಾದ್ಯಂತ ಭಜರಂಗದಳ ಸಂಘಟನೆಯಿಂದ ಪ್ರತಿಭಟನೆ

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಖಂಡಿಸಿ ಫೆಬ್ರವರಿ 23ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಭಜರಂಗದಳ ಕರೆ ನೀಡಿದೆ. ಶಿವಮೊಗ್ಗದಲ್ಲಿ ಕಾರ್ಯಕರ್ತನ ಹತ್ಯೆಯಿಂದ ರೋಸಿಹೋದ ಭಜರಂಗದಳ ಇಡೀ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ತೀರ್ಮಾನ ಮಾಡಿದೆ. ಬುಧವಾರ ಕರ್ನಾಟಕದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಭಜರಂಗದಳ ಸಂಗಟನೆ ತಿಳಿಸಿದೆ.

ಹಿಜಾಬ್‌ ವಿಚಾರವಾಗಿ ನಗರದಲ್ಲಿ ಮೂಡಿದ್ದ ಗೊಂದಲದ ನಡುವೆ ನಿನ್ನೆ ರಾತ್ರಿ ಹಿಂದೂ ಕಾರ್ಯಕರ್ತನ ಹತ್ಯೆಯಿಂದ ತೀವ್ರ ಸ್ವರೂಪ ಪಡೆದುಕೊಂಡಿದೆ. ನಿನ್ನೆಯಿಂದ ಶಿವಮೊಗ್ಗ ನಗರದಲ್ಲಿ ಗದ್ದಲ, ಗಲಭೆ, ಕಲ್ಲು ತೂರಾಟ, ಕಾರು, ಮನೆ, ಅಂಗಡಿಗಳ ಗಾಜನ್ನು ಉದ್ರಿಕ್ತರು ಪುಡಿ ಪುಡಿ ಮಾಡಿದ್ದಾರೆ. ರಸ್ತೆಯಲ್ಲಿ ಸಿಕ್ಕ ಸಿಕ್ಕ ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿತ್ತು.

ಈಗಾಗಲೇ ಕೊಲೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ನಗರದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

Share Post