DistrictsPolitics

ಸಿಎಂ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ವೇಳೆ ಬೆಂಕಿ; ತಪ್ಪಿದ ಅನಾಹುತ

ಉಡುಪಿ; ಸಿಎಂ ಬಸವರಾಜ ಬೊಮ್ಮಾಯಿಯವರಿದ್ದ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ವೇಳೆ ಹೆಲಿಪ್ಯಾಡ್‌ ಬಳಿ ಬೆಂಕಿ ಕಾಣಿಸಕೊಂಡ ಘಟನೆ ನಡೆದಿದೆ. ಇದರಿಂದಾಗಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಆದ್ರೆ ಅಗ್ನಿಶಾಮಕ ಸಿಬ್ಬಂದಿ ತಕ್ಷ಼ಣ ಬೆಂಕಿಯನ್ನು ನಂದಿಸಿ ಯಾವುದೇ ಅನಾಹುತವಾಗದಂತೆ ತಡೆದಿದ್ದಾರೆ.

ಸಿಎಂ ಬೊಮ್ಮಾಯಿವರು ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ ಇಂದು ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಆಗಮಿಸಿದ್ದರು. ಅರೇಶಿರೂರು ಬಳಿ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ವ್ಯವಸ್ಥೆ ಮಾಡಲಾಗಿತ್ತು. ಇಲ್ಲಿ ಹೆಲಿಕಾಪ್ಟರ್‌ ಫ್ಯಾನ್‌ನ ಗಾಳಿಗೆ ಹೆಲಿಪ್ಯಾಡ್‌ ಪಕ್ಕದ ಹುಲ್ಲುಗಾವಲಿಗೆ ಬೆಂಕಿ ಹೊತ್ತುಕೊಂಡಿದೆ. ಸಿಎಂ ಎಸ್ಕಾರ್ಟ್‌ ಅಲ್ಲಿಂದ ತೆರಳಿದ ಕೆಲ ಸಮಯದಲ್ಲೇ ಈ ಘಟನೆ ನಡೆದಿದೆ. ಆದ್ರೆ ಅಗ್ನಿಶಾಮಕ ಸಿಬ್ಬಂದಿ ಶೀಘ್ರವಾಗಿ ಬೆಂಕಿಯನ್ನು ನಂದಿಸಿದ್ದಾರೆ.

Share Post