DistrictsNational

ಉತ್ತರ ಪ್ರದೇಶದಲ್ಲಿ ಬೆಂಕಿ ದುರಂತ; ಒಂದೇ ಕುಟುಂಬದ ಐವರು ದುರ್ಮರಣ

ಲಖನೌ; ಉತ್ತರ ಪ್ರದೇಶದಲ್ಲಿ ಭೀಕರ ದುರ್ಘಟನೆಯೊಂದು ನಡೆದಿದೆ. ಇಲ್ಲಿನ ಮೌ ಸಿಟಿಯ ಸಮೀಪವಿರುವ ಗ್ರಾಮವೊಂದರಲ್ಲಿ ಅಗ್ನಿ ದುರಂತ ನಡೆದಿದ್ದು, ಒಂದೇ ಕುಟುಂಬದ ಐದು ಮಂದಿ ಸಜೀವವಾಗಿ ದಹನವಾಗಿದ್ದಾರೆ.

ಶಹಾಪುರ್‌ ಎಂಬ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಇದ್ದಕ್ಕಿದ್ದಂತೆ ಬೆಂಕಿ ಇಡೀ ಮನೆ ಆವರಿಸಿದೆ. ಇದ್ರಿಂದಾಗಿ ಮನೆಯಲ್ಲಿ ಮಲಗಿದ್ದವರೆಲ್ಲಾ ಬೆಂಕಿಗೆ ಆಹುತಿಯಾಗಿದ್ದಾರೆ. ಮೃತರ ಕುಟುಂಬಗಳಿಗೆ ಉತ್ತರ ಪ್ರದೇಶ ಸರ್ಕಾರ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.

Share Post