CrimeDistricts

ಅಂಬಾರಿ ಹೊತ್ತಿದ್ದ ಆನೆಗೆ ಗುಂಡೇಟು; ರೈತ ಅರೆಸ್ಟ್‌

ಮೈಸೂರು; 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ದಸರಾ ಆನೆ ಬಲರಾಮನಿಗೆ ರೈತನೊಬ್ಬ ಗುಂಡೇಟು ಹೊಡೆದಿದ್ದಾನೆ. ಜಮೀನೊಂದಕ್ಕೆ ನುಗ್ಗಿದ ಹಿನ್ನೆಲೆಯಲ್ಲಿ ಜಮೀನು ಮಾಲೀಕ ಗುಂಡು ಹೊಡೆದಿದ್ದು, ಸದ್ಯ ಆತನನ್ನು ಬಂಧಿಸಲಾಗಿದೆ.

ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರದಲ್ಲಿ ಬಲರಾಮನನ್ನು ಆರೈಕೆ ಮಾಡಲಾಗುತ್ತಿತ್ತು. ಅದು ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ನುಗ್ಗಿದೆ. ಈ ವೇಳೆ ಜಮೀನು ಮಾಲೀಕ ಸುರೇಶ್‌, ಸಿಂಗಲ್‌ ಬ್ಯಾರಲ್‌ ಬಂದೂಕಿನಿಂದ ಆನೆಗೆ ಗುಂಡು ಹಾರಿಸಿದ್ದಾನೆ. ಆನೆಯ ತೊಡೆಯ ಭಾಗಕ್ಕೆ ಗುಂಡು ತಗುಲಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಪಶುವೈದ್ಯಾಧಿಕಾರಿ ಡಾ.ರಮೇಶ್ ಚಿಕಿತ್ಸೆ ನೀಡಿದ್ದು, ಆನೆ ಚೇತರಿಸಿಕೊಳ್ಳುತ್ತಿದೆ.

ವನ್ಯಜೀವಿ ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ಆರೋಪಿ ಸುರೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಬಂದೂಕು, ಕಾರ್ಟ್ರಿಜ್‌ನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Share Post