DistrictsPolitics

ಖರ್ಗೆ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ಕಲಬುರಗಿ; ಮೋದಿ ವಿಷದ ಹಾವು ಎಂದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಹರಿಹಾಯ್ದಿದ್ದಾರೆ. ಪ್ರಧಾನಿ ಮೋದಿಯವರನ್ನು ಇಡೀ ದೇಶ ಏಕೆ, ಇಡೀ ಜಗತ್ತೇ ಮೆಚ್ಚಿಕೊಂಡಿದೆ. ಅಂತಹ ವ್ಯಕ್ತಿಯ ಬಗ್ಗೆ ಖರ್ಗೆ ಅವಹೇಳನ ರೀತಿಯಲ್ಲಿ ಮಾತನಾಡಿರುವುದನ್ನು ನಾನು ಖಂಡಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಮಲ್ಲಿಕಾರ್ಜುನ ಖರ್ಗೆ ಇದೇ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದರೆ, ಕಾಂಗ್ರೆಸ್‌ ಗೆ ಬರುವ ಮತಗಳೂ ಬರುವುದಿಲ್ಲ ಎಂದು ಹೇಳಿದರು.

ಒಬ್ಬ ಪಂಚಾಯತ್‌ ಸದಸ್ಯ ಕೂಡಾ ರಾಜೀನಾಮೆ ಕೊಡೋದಕ್ಕೆ ಮುಂದಾಗೋದಿಲ್ಲ. ಆದ್ರೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಬೇರೆಯವರಿಗೆ ಅವಕಾಶ ಮಾಡಿಕೊಟ್ಟಿದ್ದೇನೆ. ಬಿಜೆಪಿಯಲ್ಲಿ ಎಲ್ಲರಿಗೂ ಅಧಿಕಾರ ಸಿಗುತ್ತದೆ. ನಾನು ಅಧಿಕಾರ ಅನುಭವಿಸಿದ್ದೇನೆ. ಈಗ ನಾನು ಪಕ್ಷ ಕಟ್ಟುವ ಜವಾಬ್ದಾರಿ ವಹಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

Share Post