CrimeDistricts

ಅನ್ಯಕೋಮಿನ ಹುಡುಗನನ್ನು ಪ್ರೀತಿಸಿದ್ದಕ್ಕೆ ಯುವತಿಯನ್ನು ಪೋಷಕರೇ ಕೊಂದರು..!

ಬಳ್ಳಾರಿ; ಅನ್ಯಕೋಮಿನ ಯುವಕನನ್ನು ಪ್ರೀತಿಸಿದ್ದಕ್ಕೆ ಯುವತಿಯನ್ನು ತಂದೆಯೇ ಕೊಂದಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಓಂಕಾರಗೌಡ ಪೊಲೀಸರ ಬಳಿ ತನ್ನ ಮಗಳನ್ನು ಕೊಂದಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ

ಓಂಕಾರಗೌಡರ ಮಗಳ ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು. ಇದನ್ನು ತಿಳಿದ ಓಂಕಾರಗೌಡ ಬುದ್ಧಿವಾದ ಹೇಳಿದ್ದಾರೆ. ಆದರೂ ಯುವತಿ ಕೇಳದೇ ಯುವಕನೊಂದಿಗೆ ಒಡಾನಟ ಮುಂದುವರೆಸಿದ್ದಳು. ಇದ್ರಿಂದ ಕುಪಿತಗೊಂಡ ತಂದೆ ಓಂಕಾರ ಗೌಡ ಅವರು ಮಗಳನ್ನು ಸಿನಿಮಾಗೆ ಕರೆದುಕೊಂಡು ಹೋಗಿ ಅನಂತರ ದೇವರ ದರ್ಶನ ಮಾಡಿಸಿದ್ದಾರೆ. ಆಭರಣದ ಅಂಗಡಿಯಲ್ಲಿ ಓಲೆ, ಉಂಗುರವನ್ನೂ ಕೊಡಿಸಿದ್ದಾರೆ. ಅನಂತರ ಮನೆಗೆ ವಾಪಸ್‌ ಬರುವಾಗ ಮಾರ್ಗ ಮಧ್ಯೆ ಎಚ್‌ಎಲ್‌ಸಿ ಕಾಲುವೆ ಬಳಿಗೆ ಮಗಳನ್ನು ಕರೆದುಕೊಂಡು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾರೆ.

Share Post