DistrictsPolitics

ನಿಮ್ಮ ಮಗನಿಗೆ ಅಧಿಕಾರದ ಶಕ್ತಿ ನೀಡಿ; ಮಂಡ್ಯ ಜನರಲ್ಲಿ ಡಿಕೆಶಿ ಮನವಿ

ಮಂಡ್ಯ; ನಾನು ನಿಮ್ಮ ಮಗ, ಈ ಮಣ್ಣಿನ ಮಗ, ನಿಮ್ಮ ಮಗನಿಗೆ ಅಧಿಕಾರ ನೀಡಿ ಎಂದು ಪರೋಕ್ಷವಾಗಿ ಸಿಎಂ ಆಗವ ಆಸೆಯನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವ್ಯಕ್ತಪಡಿಸಿದ್ದಾರೆ.

ಮಂಡ್ಯದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ನಾವು ಜೆಡಿಎಸ್‌ಗೆ ಅಧಿಕಾರ ನೀಡಿದ್ದೆವೆ. ಆದರೆ ಅವರು ಉಳಿಸಿಕೊಳ್ಳಲಿಲ್ಲ. ಹಿಂದೆ ದೇವೇಗೌಡರನ್ನು ಸಿಎಂ ಆಗಿ ಮಾಡಿದ್ವಿ, ಪ್ರಧಾನ ಮಂತ್ರಿಯಾಗಿ ಮಾಡಿದ್ವಿ. ನಾನು ನಿಮ್ಮ ಮಣ್ಣಿನ ಮಗನಾಗಿ ಕೇಳುತ್ತಿದ್ದೇನೆ. ನಾನು ನಿಮ್ಮ ಮಣ್ಣಿನ ಮಗನಾಗಿ ಕೇಳುತ್ತಿದ್ದೇನೆ. ಕೆಪಿಸಿಸಿ ಅಧ್ಯಕ್ಷನಾಗಿ ಕೇಳುತ್ತಿದ್ದೇನೆ. ಈ ನಿಮ್ಮ ಮಗನಿಗೆ ಅಧಿಕಾರದ ಶಕ್ತಿ ನೀಡಿ ಎಂದು ಪರೋಕ್ಷವಾಗಿ ಸಿಎಂ ಆಸೆ ವ್ಯಕ್ತಪಡಿಸಿದರು.

ಮಂಡ್ಯ ಜಿಲ್ಲೆಗೂ ನನಗೂ 40 ವರ್ಷದ ಸಂಬಂಧವಿದೆ. ಮಂಡ್ಯ, ಕನಕಪುರ, ರಾಮನಗರ ನನಗೆ ಬೇರೆ ಅಲ್ಲ. ಎಸ್.ಎಂ.ಕೃಷ್ಣ ಕಾಲದಿಂದಲೂ ಈ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಮಂಡ್ಯ ಜಿಲ್ಲೆಯ ಏಳಕ್ಕೆ 7 ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿದ್ರಿ. ನಾವು ಜೆಡಿಎಸ್ಗೆ ಅಧಿಕಾರ ಕೊಟ್ಟಿದ್ದೆವು, ಅವರು ಉಳಿಸಿಕೊಂಡಿಲ್ಲ. ನಾನು ನಿಮ್ಮ ಮಣ್ಣಿನ ಮಗನಾಗಿ ಕೇಳ್ತಿದ್ದೀನಿ, ಅಧಿಕಾರದ ಶಕ್ತಿ ಕೊಡಿ ಎಂದು ಡಿಕೆಶಿ ಮನವಿ ಮಾಡಿದರು.

 

Share Post