CrimeDistricts

ಬೈಕ್‌ಗೆ ಕ್ಯಾಂಟರ್‌ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ರಾಯಚೂರು; ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ಐಚರ್ ಗೂಡ್ಸ್ ಕ್ಯಾಂಟರ್ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ನಡೆದಿದ್ದು, ಬೈಕ್‍ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಸಂಬಂಧಿಯೊಬ್ಬರ ಅಂತ್ಯಕ್ರಿಯೆಗೆ ಹೋಗುತ್ತಿದ್ದರು. ಈ ವೇಳೆ ಅಪಘಾತವಾಗಿದೆ.

ಬಸವರಾಜ್(45), ಆತನ ಮಗ ನರೇಶ್(8) ಹಾಗೂ ಸಂಬಂಧಿ ಭೀಮವ್ವ(40) ಮೃತ ದುರ್ದೈವಿಗಳು. ಮೃತರೆಲ್ಲರೂ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದ್ದು, ಕುರ್ಡಿ ಗ್ರಾಮಕ್ಕೆ ಹೊರಟಿದ್ದರು. ರಾಯಚೂರು ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಅತಿ ವೇಗದಲ್ಲಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕ್ಯಾಂಟರ್ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದೆ. ಅಪಘಾತದಿಂದ ಮೂವರ ಮೃತದೇಹಗಳು ಜಮೀನಿನಲ್ಲಿ ಬಿದ್ದಿವೆ. ಘಟನೆ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Share Post